Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:4 - ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಮಗುವು ಅಪ್ಪಾ, ಅಮ್ಮಾ, ಎಂದು ಕೂಗಬಲ್ಲದಾಗುವದರೊಳಗೆ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ ಆ ಮಗನು ಅಪ್ಪಾ, ಅಮ್ಮಾ ಎಂದು ಕರೆಯಲು ತೊಡಗುವ ಮೊದಲೇ ದೇವರು ದಮಸ್ಕ ಮತ್ತು ಸಮಾರ್ಯದ ಎಲ್ಲಾ ಐಶ್ವರ್ಯವನ್ನು ತೆಗೆದು ಅದನ್ನು ಅಶ್ಶೂರದ ಅರಸನಿಗೆ ಕೊಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:4
16 ತಿಳಿವುಗಳ ಹೋಲಿಕೆ  

ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.


ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.


ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.


ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.


ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಮತ್ತೊಮ್ಮೆ ನನಗೆ,


ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.


ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.


ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು