Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ಆ ನೀರು ಏರುತ್ತಾಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿಬಿಡುವದು. “ಇಮ್ಮಾನುವೇಲನೇ, ಈ ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿಬಿಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:8
22 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,


ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಅವನು ಹದ್ದಿನ ಹಾಗೆ ಹಾರಿ, ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು.


ಸಮುದ್ರವೇ ಬಾಬಿಲೋನಿನ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದೆ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.


ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.


ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.


ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.


ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.


ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು