ಯೆಶಾಯ 9:14 - ಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14-15 ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ತಾಲತೃಣಗಳನ್ನೂ ಒಂದೇ ದಿನದಲ್ಲಿ ಕಡಿದುಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು. ಅಧ್ಯಾಯವನ್ನು ನೋಡಿ |