Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:21 - ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮ ಮನಸ್ಸೆಯನ್ನು ತಿಂದುಬಿಡುತ್ತದೆ. ಈ ಎರಡೂ ಒಟ್ಟಾಗಿ ಯೆಹೂದಕ್ಕೆ ವಿರುದ್ಧವಾಗಿರುವುದು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:21
15 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.


ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.


ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.


ಆಗ ಸೌಲನೂ, ಅವನ ಸಂಗಡ ಯುದ್ಧಕ್ಕಿದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ, ಫಿಲಿಷ್ಟಿಯರಲ್ಲಿ ಗಲಿಬಿಲಿಯುಂಟಾಗಿ ಒಬ್ಬನ ಖಡ್ಗವು ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನನ್ನು ಕೊಂದುಹಾಕುತ್ತಿದ್ದರು.


ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.


ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ಆಗ ನನ್ನ ಎರಡನೆಯ ಕೋಲಾದ “ಐಕ್ಯ” ಎಂಬುದನ್ನು ಮುರಿದುಬಿಟ್ಟೆನು. ಹೀಗೆ ಯೆಹೂದಕ್ಕೂ, ಇಸ್ರಾಯೇಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು