Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:5 - ಕನ್ನಡ ಸಮಕಾಲಿಕ ಅನುವಾದ

5 ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:5
29 ತಿಳಿವುಗಳ ಹೋಲಿಕೆ  

ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


ಚಾವಟಿಗೆ, ಚಬುಕಿನ ಶಬ್ದವೂ, ಚಕ್ರಗಳ ಧಡಧಡನೆಯ ಶಬ್ದವೂ, ಕುದುರೆಗಳ ಕುಣಿದಾಟವೂ, ರಥಗಳ ಹಾರಾಟವೂ ಇದೆ.


ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.


ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.


ಸೌಲನು ಯಾಜಕನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಫಿಲಿಷ್ಟಿಯರ ದಂಡಿನಲ್ಲಿ ಕೋಲಾಹಲವು ಹೆಚ್ಚಾಯಿತು. ಆದ್ದರಿಂದ ಸೌಲನು ಯಾಜಕನಿಗೆ, “ನಿನ್ನ ಕೈ ಹಿಂದೆ ತೆಗೆದುಕೋ,” ಎಂದನು.


ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.


ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.


ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.


ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.


ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.


ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು