Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:2 - ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ - ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಕೆರೂಬಿಯ ಕೆಳಗೆ ಪ್ರವೇಶಿಸಿ ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿತಂದು ಪಟ್ಟಣದ ಮೇಲೆ ಎರಚು ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೆ ಹೋಗಿ ಅಲ್ಲಿ ಪ್ರವೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನ್ನು ನಿನ್ನ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:2
19 ತಿಳಿವುಗಳ ಹೋಲಿಕೆ  

ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.


ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.


ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ.


ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.


ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು