Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:12 - ಕನ್ನಡ ಸಮಕಾಲಿಕ ಅನುವಾದ

12 ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ ನನ್ನ ನಿಯಮಗಳನ್ನು ಅನುಸರಿಸದೆ ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:12
35 ತಿಳಿವುಗಳ ಹೋಲಿಕೆ  

ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಉತ್ತರದ ಕಡೆಗೆ ಎದುರಾಗಿದ್ದ ಬಾಗಿಲಿನ ಕಡೆಗೆ ತಂದನು. ಅಲ್ಲಿ ತಮ್ಮೂಜ್ ದೇವತೆಗೋಸ್ಕರ ಅಳುವ ಹೆಂಗಸರು ಕೂತಿದ್ದರು.


ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾಗಲಿಲ್ಲ, ಅವರು ತಮ್ಮ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ನೀಡಿದ ನಿಯಮಗಳನ್ನು ಪಾಲಿಸಲಿಲ್ಲ.


ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.


ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.


ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.


ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.


ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.


ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.


ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದನು. ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.


ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.


“ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,


ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಆದರೆ ಜನರು ಕೇಳದೆ ಹೋದರು. ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.


ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು.


ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು