Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:18 - ಕನ್ನಡ ಸಮಕಾಲಿಕ ಅನುವಾದ

18 “ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯ ವಸ್ತುಗಳನ್ನೂ, ಸಮಸ್ತ ಅಸಹ್ಯ ವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಅಲ್ಲಿಗೆ ಸೇರಿ ಎಲ್ಲಾ ಅಸಹ್ಯವಸ್ತುಗಳನ್ನೂ ಸಮಸ್ತ ಹೇಯವಿಗ್ರಹಗಳನ್ನೂ ಅಲ್ಲಿಂದ ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಜನರು ಹಿಂದಕ್ಕೆ ಬಂದಾಗ ದೇಶದಲ್ಲಿರುವ ಎಲ್ಲಾ ಹೊಲಸು ವಿಗ್ರಹಗಳನ್ನು ತೆಗೆದುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:18
14 ತಿಳಿವುಗಳ ಹೋಲಿಕೆ  

ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”


ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.


ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು