Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:14 - ಕನ್ನಡ ಸಮಕಾಲಿಕ ಅನುವಾದ

14 ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತವ್ಯೂಹಗಳವರನ್ನೂ ನಾನು ಎಲ್ಲ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನ ಸುತ್ತಲೂ ಇರುವವರನ್ನೆಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿಬಿಡುವೆನು. ಅವನ ಕೆಲಸಗಾರರನ್ನು ಮತ್ತು ಅವನ ಸೈನ್ಯವನ್ನು ಗಾಳಿಗೆ ತೂರಿಬಿಡುವೆನು. ಮತ್ತು ಅವರನ್ನು ಖಡ್ಗದೊಡನೆ ಬೆನ್ನಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:14
10 ತಿಳಿವುಗಳ ಹೋಲಿಕೆ  

ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.


ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು