Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:28 - ಕನ್ನಡ ಸಮಕಾಲಿಕ ಅನುವಾದ

28 “ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಆದಕಾರಣ ನೀನು ಅವರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ನೆರವೇರದೆ ಇರದು; ನಾನಾಡುವ ಮಾತು ನೆರವೇರುವುದು ಖಂಡಿತ’ ಇದು ಕರ್ತನಾದ ಯೆಹೋವನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ನೀನು ಅವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವದು ಖಂಡಿತ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.’” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:28
15 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.


ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು.


ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.


ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು.


ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು