ಯೆಹೆಜ್ಕೇಲನು 13:10 - ಕನ್ನಡ ಸಮಕಾಲಿಕ ಅನುವಾದ10 “ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕ್ಷೇಮವಿಲ್ಲದಿದ್ದರೂ ಅವರು ಕ್ಷೇಮ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರಲ್ಲಾ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೆ, ಇಗೋ, ಅದಕ್ಕೆ ಸುಣ್ಣ ಬಳಿಯುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನ್ನ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಬಲಹೀನವಾದ ಗೋಡೆಯನ್ನು ಕಟ್ಟುತ್ತಾರೆ; ಅದು ಬಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |