Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:12 - ಕನ್ನಡ ಸಮಕಾಲಿಕ ಅನುವಾದ

12 “ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಗೋಡೆಯು ಬಿದ್ದ ಮೇಲೆ ನೀವು ಬಳಿದ ಸುಣ್ಣ ಎಲ್ಲಿ ಎಂದು ನಿಮ್ಮನ್ನು ಕೇಳುವರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’” ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:12
11 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.


ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು.


ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.


ಆಗ ಜೆಬೂಲನು ಅವನಿಗೆ, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು, ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನರಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧ ಮಾಡು,” ಎಂದನು.


ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,


ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು.


ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು