Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:18 - ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ ಉದ್ದವಾದವರಿಗೂ ಗಿಡ್ಡಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನ್ನು ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನ್ನು ನೀವು ತಯಾರಿಸುತ್ತೀರಿ. ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕೂ ನೀವು ಇದನ್ನು ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:18
11 ತಿಳಿವುಗಳ ಹೋಲಿಕೆ  

ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’


“ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.


ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು.


ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು