Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:3 - ಕನ್ನಡ ಸಮಕಾಲಿಕ ಅನುವಾದ

3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:3
21 ತಿಳಿವುಗಳ ಹೋಲಿಕೆ  

ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.


ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.


ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!


“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.


ಮೂರ್ಖರೇ! ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?


ಯೆಹೋವ ದೇವರು ನನಗೆ, “ಇನ್ನು ಬುದ್ಧಿಹೀನವಾದ ಕುರುಬನ ಆಯುಧಗಳನ್ನು ತೆಗೆದುಕೋ.


ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.


ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.


ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು