Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್‍ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಬಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:5
37 ತಿಳಿವುಗಳ ಹೋಲಿಕೆ  

“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”


ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.


ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.


ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.


ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.


“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.


ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.


“ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.


ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?


ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು