Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:9 - ಕನ್ನಡ ಸಮಕಾಲಿಕ ಅನುವಾದ

9 ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:9
40 ತಿಳಿವುಗಳ ಹೋಲಿಕೆ  

ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ಯೆಹೋವ ದೇವರು ಜನಾಂಗಗಳ ಗ್ರಂಥದಲ್ಲಿ ಬರೆಯುವಾಗ, “ಚೀಯೋನಿನಲ್ಲಿ ಇವನು ಹುಟ್ಟಿದನು,” ಎಂದು ಬರೆಯುವರು.


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”


ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.


ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು.


ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ.


ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.


ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 642 ಮಂದಿ.


ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.


ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.


ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’ ”


ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.


ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.


ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.


ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು