Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:11 - ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು, ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತ್ವವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:11
27 ತಿಳಿವುಗಳ ಹೋಲಿಕೆ  

ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.


ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.


“ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.


ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.


“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.


ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.


ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”


ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು