Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:14 - ಕನ್ನಡ ಸಮಕಾಲಿಕ ಅನುವಾದ

14 ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:14
26 ತಿಳಿವುಗಳ ಹೋಲಿಕೆ  

ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.


ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.


ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.


ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.


ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.


ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ.


“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?


ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್.


ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು