Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:17 - ಕನ್ನಡ ಸಮಕಾಲಿಕ ಅನುವಾದ

17 “ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:17
18 ತಿಳಿವುಗಳ ಹೋಲಿಕೆ  

ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.


“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.


“ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.


ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”


“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”


ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


“ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು