Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:22 - ಕನ್ನಡ ಸಮಕಾಲಿಕ ಅನುವಾದ

22 ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿ ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಆಹಾ, ಅವರು ನಿಮ್ಮ ಬಳಿಗೆ ಸೇರಿದಾಗ ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇವಿುನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ, ಅದಕ್ಕೆ ಉಂಟುಮಾಡಿದ ಎಲ್ಲಾ ಕೇಡುಗಳ ವಿಷಯವಾಗಿಯೂ ಸಮಾಧಾನ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸ್ವತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:22
27 ತಿಳಿವುಗಳ ಹೋಲಿಕೆ  

ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”


ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ.


ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’


“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.


ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.


“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.


ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


“ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು