Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:13 - ಕನ್ನಡ ಸಮಕಾಲಿಕ ಅನುವಾದ

13 ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:13
25 ತಿಳಿವುಗಳ ಹೋಲಿಕೆ  

ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.


ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.


ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.


ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”


ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ.


ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


“ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.


ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು.


ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;


ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.


“ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.


“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು