Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:38 - ಕನ್ನಡ ಸಮಕಾಲಿಕ ಅನುವಾದ

38 ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ವ್ಯಭಿಚಾರಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:38
26 ತಿಳಿವುಗಳ ಹೋಲಿಕೆ  

“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.


ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ,


“ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.


“ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.


ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.


ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.


ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.


ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.


“ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.


ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.


ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.


ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.


ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು