Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:13 - ಕನ್ನಡ ಸಮಕಾಲಿಕ ಅನುವಾದ

13 ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದದ ರಾಜನನ್ನಾಗಿ ಮಾಡುವುದಾಗಿ ನೆಬೂಕದ್ನೆಚ್ಚರನು ರಾಜನ ಕುಟುಂಬದವರಲ್ಲೊಬ್ಬನೊಡನೆ ಒಪ್ಪಂದಮಾಡಿಕೊಂಡು ತನಗೆ (ನೆಬೂಕದ್ನೆಚ್ಚರನಿಗೆ) ಆಧಿನವಾಗಿರುವದಾಗಿ ಅವನಿಂದ (ರಾಜನ ಕುಟುಂಬದವನಿಂದ) ಪ್ರಮಾಣ ಮಾಡಿಸಿಕೊಂಡನು. ಅವನು ಯೆಹೂದದ ಬಲಿಷ್ಠರೆಲ್ಲರನ್ನು ಸಹ ಈ ಒಪ್ಪಂದದಲ್ಲಿ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:13
12 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


“ ‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.


ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.


ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.


ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,


“ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು