Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:17 - ಕನ್ನಡ ಸಮಕಾಲಿಕ ಅನುವಾದ

17 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಹಾಕಿ ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಜಿಪ್ಟಿನ ರಾಜನು ಯೆಹೂದದ ರಾಜನನ್ನು ರಕ್ಷಿಸಲು ಸಾಧ್ಯವಿಲ್ಲ. ಅವನು ಬಹಳ ಸೈನಿಕರನ್ನು ಕಳುಹಿಸಬಹುದು, ಆದರೆ ಈಜಿಪ್ಟಿನ ಶಕ್ತಿಯು ಯೆಹೂದವನ್ನು ರಕ್ಷಿಸಲಾರದು. ನೆಬೂಕದ್ನೆಚ್ಚರನ ಸೈನ್ಯವು ಕೆಸರಿನ ಇಳಿಜಾರುಗಳನ್ನೂ ತಡೆಗಟ್ಟುಗಳನ್ನೂ ಕಟ್ಟಿ ಪಟ್ಟಣವನ್ನು ವಶಪಡಿಸಿಕೊಳ್ಳುವುದು. ಎಷ್ಟೋ ಮಂದಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:17
10 ತಿಳಿವುಗಳ ಹೋಲಿಕೆ  

“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.


ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.


ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.


ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು.


ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.


ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.


ಆಗ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ, ದಿಬ್ಬವನ್ನು ಕೆಡವಿ, ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವನು. ದಕ್ಷಿಣದ ಭುಜಬಲವಾದರೂ ಅವನು ಆಯ್ದುಕೊಂಡ ಜನರಾದರೂ ಎದುರಿಸಿ ನಿಲ್ಲುವುದಕ್ಕೆ ಅಶಕ್ತರಾಗುವರು.


ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು