Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:6 - ಕನ್ನಡ ಸಮಕಾಲಿಕ ಅನುವಾದ

6 ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ರೆಂಬೆಗಳನ್ನು ಹರಡಿಸಿ ಚಿಗುರುಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಬೀಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನ್ನ ಕೊಂಬೆಗಳನ್ನು ಗರುಡದ ಕಡೆಗೆ ಚಾಚಿಕೊಂಡು ತನ್ನ ಬೇರುಗಳನ್ನು ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಬೆಗಳನ್ನು ಬೆಳೆಸಿ, ಎಲೆಗಳನ್ನು ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:6
10 ತಿಳಿವುಗಳ ಹೋಲಿಕೆ  

ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.


ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.


“ ‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.


“ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.


ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.


ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.


“ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು