Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:7 - ಕನ್ನಡ ಸಮಕಾಲಿಕ ಅನುವಾದ

7 “ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “‘ಅಗಲವಾದ ರೆಕ್ಕೆಗಳುಳ್ಳ ಗರಿ ತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅಗಲ ರೆಕ್ಕೆಗಳಿದ್ದ ಇನ್ನೊಂದು ಹದ್ದು ದ್ರಾಕ್ಷಾಲತೆಯನ್ನು ನೋಡಿತು. ಈ ಹದ್ದಿಗೆ ತುಂಬಾ ಪುಕ್ಕಗಳಿದ್ದವು. ದ್ರಾಕ್ಷಾಲತೆಯು ತನ್ನ ಬೇರುಗಳನ್ನು ಹದ್ದಿನ ಕಡೆಗೆ ತಿರುಗಿಸಿತ್ತು. ಹದ್ದಿಗೆ ನೀರು ಹಾಯಿಸಲು ಸಾಧ್ಯವಾಗುವಂತೆ ಅದು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿಕೊಂಡಿತ್ತು. ಅದು ತಾನು ನೆಡಲ್ಪಟ್ಟಿದ್ದ ಸ್ಥಳದಿಂದ ಬೇರೆ ಕಡೆಗೆ ತಿರುಗಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:7
7 ತಿಳಿವುಗಳ ಹೋಲಿಕೆ  

ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು.


ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?


ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.


ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು