Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:26 - ಕನ್ನಡ ಸಮಕಾಲಿಕ ಅನುವಾದ

26 ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಬ್ಬ ಒಳ್ಳೆಯವನು ಬದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತ್ವಕ್ಕಾಗಿ ಅವನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:26
11 ತಿಳಿವುಗಳ ಹೋಲಿಕೆ  

“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.


“ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.


ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.


ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.


ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ.


“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.


ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.


ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು