Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:27 - ಕನ್ನಡ ಸಮಕಾಲಿಕ ಅನುವಾದ

27 ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಒಬ್ಬ ಪಾಪಿ ಬದಲಾವಣೆ ಹೊಂದಿ ನೀತಿವಂತನಾಗಿ ಬಾಳಿದರೆ ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:27
15 ತಿಳಿವುಗಳ ಹೋಲಿಕೆ  

“ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.


ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.


ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು.


ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು