ಯೆಹೆಜ್ಕೇಲನು 18:30 - ಕನ್ನಡ ಸಮಕಾಲಿಕ ಅನುವಾದ30 “ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.