Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:4 - ಕನ್ನಡ ಸಮಕಾಲಿಕ ಅನುವಾದ

4 ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:4
19 ತಿಳಿವುಗಳ ಹೋಲಿಕೆ  

ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.


“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.


ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.


ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ.


“ಆದರೆ ಒಬ್ಬ ಮನುಷ್ಯನು ನೀತಿವಂತನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡೆಸಿ,


ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.


ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.


ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು.


ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು