Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಲತೆಯನ್ನು ಕ್ರೋಧಿಗಳು ಕಿತ್ತು ನೆಲದ ಮೇಲೆ ಬಿಸಾಟುಬಿಟ್ಟರು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿಕೊಂಬೆಗಳು ಮುರಿದು ಒಣಗಿಹೋದವು, ಬೆಂಕಿಯು ಅವುಗಳನ್ನು ನುಂಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:12
32 ತಿಳಿವುಗಳ ಹೋಲಿಕೆ  

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.


ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?


ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.


ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”


ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.


ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.


ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.


ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.


ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


“ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು