ಯೆಹೆಜ್ಕೇಲನು 19:14 - ಕನ್ನಡ ಸಮಕಾಲಿಕ ಅನುವಾದ14 ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.” ಅಧ್ಯಾಯವನ್ನು ನೋಡಿ |
ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.