Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:7 - ಕನ್ನಡ ಸಮಕಾಲಿಕ ಅನುವಾದ

7 ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಪಟ್ಟಣಗಳನ್ನು ಹಾಳುಮಾಡಿ [ಬಹುಮಂದಿ] ವಿಧವೆಯರಾದವರನ್ನು ಕಂಡಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವೂ ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:7
14 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.


ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು.


ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.


ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.


ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.


ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”


ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು