Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:34 - ಕನ್ನಡ ಸಮಕಾಲಿಕ ಅನುವಾದ

34 ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಕೂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಪರದೇಶಗಳಿಂದ ನಾನು ನಿಮ್ಮನ್ನು ಹೊರತರುವೆನು. ನಾನು ಆ ದೇಶಗಳಲ್ಲಿ ನಿಮ್ಮನ್ನು ಚದರಿಸಿದೆನು. ಆದರೆ ಆ ದೇಶಗಳಿಂದ ನಾನು ನಿಮ್ಮನ್ನು ಒಟ್ಟುಗೂಡಿಸಿ ಹಿಂದಕ್ಕೆ ಬರಮಾಡುವೆನು. ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ಶಿಕ್ಷಿಸಿ ನನ್ನ ಕೋಪವನ್ನು ಪ್ರದರ್ಶಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:34
13 ತಿಳಿವುಗಳ ಹೋಲಿಕೆ  

ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.


ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.


ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.


ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.


ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’


ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”


ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


“ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು