Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:35 - ಕನ್ನಡ ಸಮಕಾಲಿಕ ಅನುವಾದ

35 ನಿಮ್ಮನ್ನು ಜನರಿರುವ ಮರುಭೂಮಿಯೊಳಗೆ ತಂದು, ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ನ್ಯಾಯತೀರ್ಪು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರೆ ತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಜನಾಂಗಗಳ ಮಧ್ಯೆ ಮರುಭೂಮಿಗೆ ಕರೆತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ದೇಶಗಳಿಂದ ನಿಮ್ಮನ್ನು ಕೂಡಿಸಿ ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಾನು ಹಿಂದಿನ ಕಾಲದಲ್ಲಿ ಮಾಡಿದಂತೆ ಮರುಭೂಮಿಗೆ ನಿಮ್ಮನ್ನು ನಡೆಸುವೆನು. ಆದರೆ ಇದು ಅನ್ಯಜನಾಂಗಗಳು ವಾಸಿಸುವ ಸ್ಥಳದಲ್ಲಿರುವುದು ಮತ್ತು ನಾನು ಎದುರುಬದುರಾಗಿ ನಿಂತು ನಿಮಗೆ ನ್ಯಾಯತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:35
19 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.


ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.


ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.


ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.


ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.


ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.


ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ. ದಿನವೆಲ್ಲಾ ಮೂರ್ಖನು ನಿಮ್ಮನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪಕಮಾಡಿಕೊಳ್ಳಿರಿ.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”


ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, ‘ನನ್ನ ಪತಿ’ ಎಂದು ಕರೆಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು