Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:41 - ಕನ್ನಡ ಸಮಕಾಲಿಕ ಅನುವಾದ

41 ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆಗ ನಿಮ್ಮ ಕಾಣಿಕೆಯ ಸುವಾಸನೆಯಿಂದ ಸಂತೋಷಭರಿತನಾಗುವೆನು. ಇದು ನಿಮ್ಮನ್ನು ಹಿಂದಕ್ಕೆ ನಿಮ್ಮ ದೇಶಕ್ಕೆ ಕರೆತಂದಾಗ ಆಗುವದು. ನಾನು ನಿಮ್ಮನ್ನು ಅನೇಕ ದೇಶಗಳಲ್ಲಿ ಚದರಿಸಿದೆನು. ಆದರೆ ನಾನು ನಿಮ್ಮನ್ನು ಒಟ್ಟುಗೂಡಿಸಿ ನಿಮ್ಮ ಮೂಲಕ ನನ್ನ ಪವಿತ್ರತೆಯನ್ನು ಪ್ರದರ್ಶಿಸುವೆನು. ಆ ಎಲ್ಲಾ ದೇಶಗಳವರು ಇದನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:41
36 ತಿಳಿವುಗಳ ಹೋಲಿಕೆ  

“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


“ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”


“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.


ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ರಕ್ಷಣಾ ಮಾರ್ಗದಲ್ಲಿರುವವರಿಗೂ ನಾಶದ ಮಾರ್ಗದಲ್ಲಿರುವವರಿಗೂ ನಾವು ದೇವರಿಗೆ ಕ್ರಿಸ್ತ ಯೇಸುವಿನ ಪರಿಮಳವಾಗಿದ್ದೇವೆ.


ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.


ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು