Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:46 - ಕನ್ನಡ ಸಮಕಾಲಿಕ ಅನುವಾದ

46 “ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತಾಡುತ್ತಾ ದಕ್ಷಿಣಸೀಮೆಯ ವನದ ಪ್ರಸ್ತಾಪವನ್ನೆತ್ತಿ ಆ ವನಕ್ಕೆ ಹೀಗೆ ಸಾರಿ ಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 “ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:46
14 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.


“ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,


ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.


“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು,


ನೀನು ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು. ನಿನ್ನ ಭುಜವನ್ನು ನೀನು ಬರಿದುಮಾಡಿಕೊಂಡು, ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.


ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.


ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ; ನನ್ನ ನುಡಿ ಅವರ ಕಿವಿಗೆ ಬೀಳುತ್ತಿತ್ತು.


ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.


ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು