Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:11 - ಕನ್ನಡ ಸಮಕಾಲಿಕ ಅನುವಾದ

11 “ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಳಕೆಗೆ ಸಿದ್ಧವಿರಲೆಂದು ಕೊಡಲಾಗಿದೆ ಆ ಖಡ್ಗ ಮಸೆಯಲಿಕ್ಕೆ ಮಸೆದು, ಸಾಣೆ ಹಿಡಿದು, ಸಜ್ಜಾಗಿದೆ ಅದು ಹತ್ಯಗಾರನ ಹಿಡಿತಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಖಡ್ಗವು ಕೈಗೆ ಸಿದ್ಧವಾಗುವಂತೆ ತಿಕ್ಕುವದಕ್ಕೆ ಕೊಟ್ಟಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ತಿಕ್ಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಖಡ್ಗವು ಉಜ್ಜಲ್ಪಟ್ಟಿದೆ. ಅದು ಈಗ ಉಪಯೋಗಿಸಲ್ಪಡುತ್ತದೆ. ಖಡ್ಗವು ಹರಿತಮಾಡಲ್ಪಟ್ಟು ಚೆನ್ನಾಗಿ ಉಜ್ಜಲ್ಪಟ್ಟಿದೆ. ಅದನ್ನು ಈಗ ಕೊಲ್ಲುವವನ ಕೈಯಲ್ಲಿ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:11
8 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.


ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ. “ ‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ.


ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.


ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.


ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು