Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:17 - ಕನ್ನಡ ಸಮಕಾಲಿಕ ಅನುವಾದ

17 ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಚಪ್ಪಾಳೆಬಡಿದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಗ ನಾನೂ ಚಪ್ಪಾಳೆ ಬಡಿದು ನನ್ನ ಕೋಪವನ್ನು ನಿಲ್ಲಿಸುವೆನು. ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:17
13 ತಿಳಿವುಗಳ ಹೋಲಿಕೆ  

“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.


“ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.


ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು.


“ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.


ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.


ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.


ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.


ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಹೊಲಕ್ಕೆ ಹೋಗಬೇಡ; ದಾರಿಯಲ್ಲಿ ನಡೆಯಬೇಡ. ಏಕೆಂದರೆ ಶತ್ರುವಿನ ಖಡ್ಗವೂ, ಅಂಜಿಕೆಯೂ ಸುತ್ತಲೂ ಇವೆ.


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು