Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:22 - ಕನ್ನಡ ಸಮಕಾಲಿಕ ಅನುವಾದ

22 ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:22
17 ತಿಳಿವುಗಳ ಹೋಲಿಕೆ  

ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.


ತನ್ನ ಯುದ್ಧ ಯಂತ್ರಗಳನ್ನು ನಿನ್ನ ಗೋಡೆಗಳಿಗೆ ತಾಕಿಸುವನು. ತನ್ನ ಆಯುಧಗಳಿಂದ ನಿನ್ನ ಗೋಪುರಗಳನ್ನು ಕೆಡವಿಬಿಡುವನು.


ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು.


ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ.


ದಾವೀದನು ಉದಯಕಾಲದಲ್ಲಿ ಎದ್ದು, ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು, ತನ್ನ ತಂದೆ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತೆಗೆದುಕೊಂಡುಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ, ಸಲಕರಣೆಗಳು ಇರುವ ಸ್ಥಳಕ್ಕೆ ಬಂದನು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.


ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.


“ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.


ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.


ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು