Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:25 - ಕನ್ನಡ ಸಮಕಾಲಿಕ ಅನುವಾದ

25 “ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತಿರವಾಗಿದೆ; ಇದೇ ನಿನ್ನ ಅಪರಾಧದ ಕಡೆಗಾಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ! ನಿನಗೆ ಸಮಯವು ಹತ್ತರಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲಿನ ದುಷ್ಟ ಅಧಿಪತಿಯೇ, ನೀನು ಸಾಯುವಿ. ನಿನಗೆ ನನ್ನ ಶಿಕ್ಷೆಯು ಬಂದಾಯಿತು. ನಿನ್ನ ಅಂತ್ಯವು ಹತ್ತಿರವೇ ಇದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:25
21 ತಿಳಿವುಗಳ ಹೋಲಿಕೆ  

“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.


ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.


ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.


ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.


ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.


ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು.


“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.


ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.


ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!


ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ.


ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.


ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು