Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:16 - ಕನ್ನಡ ಸಮಕಾಲಿಕ ಅನುವಾದ

16 ಆಗ ನೀನು ಇತರ ಜನಾಂಗಗಳ ಮುಂದೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜನಾಂಗಗಳ ದೃಷ್ಟಿಯಲ್ಲಿ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವೆ; ನಾನೇ ಸರ್ವೇಶ್ವರ ಎಂದು ಆಗ ನಿನಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನ್ನ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:16
17 ತಿಳಿವುಗಳ ಹೋಲಿಕೆ  

ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.


ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.


ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು