Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:20 - ಕನ್ನಡ ಸಮಕಾಲಿಕ ಅನುವಾದ

20 ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಕೂಡಿಸಿ ಊದಿ ಉರಿಹತ್ತಿಸಿ ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಕೂಡಿಸಿ ಇಟ್ಟುಬಿಟ್ಟು ಕರಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನ್ನೆಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯಲ್ಲಿ ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:20
12 ತಿಳಿವುಗಳ ಹೋಲಿಕೆ  

“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.


“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.


ನಾನು ನಿಮ್ಮನ್ನು ಕೂಡಿಸಿ, ನನ್ನ ರೋಷದ ಬೆಂಕಿಯನ್ನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿಹೋಗುವಿರಿ.


ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.


“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೆಲ್ಲರೂ ಕೆಟ್ಟವರಾಗಿರುವುದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.


ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು