Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:25 - ಕನ್ನಡ ಸಮಕಾಲಿಕ ಅನುವಾದ

25 ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:25
30 ತಿಳಿವುಗಳ ಹೋಲಿಕೆ  

ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.


ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು.


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


“ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


“ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.


ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು