Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:9 - ಕನ್ನಡ ಸಮಕಾಲಿಕ ಅನುವಾದ

9 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:9
35 ತಿಳಿವುಗಳ ಹೋಲಿಕೆ  

“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.


“ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ. ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರನ್ನೇ ಬಿಟ್ಟುಬಿಟ್ಟಿದ್ದಾರೆ.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ, “ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,


ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,


“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?


ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.


“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.


ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು.


ಅವರೆಲ್ಲರು ವ್ಯಭಿಚಾರಿಗಳು, ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. ಅವನು ಹಿಟ್ಟು ನಾದಿದ ಮೇಲೆ, ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ.


ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


“ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,


“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.


ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.


ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.


ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.


ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ.


ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು