Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:24 - ಕನ್ನಡ ಸಮಕಾಲಿಕ ಅನುವಾದ

24 ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:24
12 ತಿಳಿವುಗಳ ಹೋಲಿಕೆ  

ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.


ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.


ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.


ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.


ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.


ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು