Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:39 - ಕನ್ನಡ ಸಮಕಾಲಿಕ ಅನುವಾದ

39 ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ತಮ್ಮ ಮಕ್ಕಳನ್ನು ಕೊಂದು ತಮ್ಮ ಬೊಂಬೆಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಹೊಲೆಗೈದರು; ಇಗೋ, ನನ್ನ ಮಂದಿರದ ನಟ್ಟನಡುವೆ ಇದನ್ನು ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರ ವಿಗ್ರಹಗಳಿಗೋಸ್ಕರ ತಮ್ಮ ಮಕ್ಕಳನ್ನು ಕೊಂದರು. ಅನಂತರ ಅದೇ ದಿನದಲ್ಲೇ ನನ್ನ ಪವಿತ್ರ ಆಲಯದೊಳಕ್ಕೆ ಹೋಗಿ ಅದನ್ನು ಹೊಲೆ ಮಾಡಿದರು. ನನ್ನ ಆಲಯದೊಳಗೆ ಅವರು ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:39
15 ತಿಳಿವುಗಳ ಹೋಲಿಕೆ  

ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ.


“ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”


ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.


ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


ನೀನು ನನ್ನ ಪರಿಶುದ್ಧ ಸಂಗತಿಗಳನ್ನು ತಿರಸ್ಕರಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರ ಪಡಿಸಿದ್ದಿ.


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು