Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:42 - ಕನ್ನಡ ಸಮಕಾಲಿಕ ಅನುವಾದ

42 “ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅಲ್ಲಿ ವಿನೋದಪಡುತ್ತಿರುವ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡಿಕರು ನಾಡಾಡಿಗರೊಂದಿಗೆ ಸೇರಿ ಅವರಿಬ್ಬರ ಕೈಗೆ ಕಡಗವನ್ನು ತೊಡಿಸಿ ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಅನೇಕರು ಬಂದರು. ಮರುಭೂಮಿಯ ಕಡೆಯಿಂದ ಜನರು ಬರುತ್ತಿರುವಾಗಲೇ ಅಮಲೇರಿಕೊಂಡು ಬಂದರು. ಅವರು ಬಳೆಗಳನ್ನು, ಸುಂದರವಾದ ಕಿರೀಟಗಳನ್ನು ಹೆಂಗಸರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:42
13 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.


ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.


ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.


ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.


ಅವನು ಮೂಗುತಿಯನ್ನೂ, ತನ್ನ ಸಹೋದರಿಯ ಕೈಗಳಲ್ಲಿದ್ದ ಬಳೆಗಳನ್ನೂ ಕಂಡು, ಆ ಮನುಷ್ಯನು ತನ್ನ ಬಳಿ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿ ರೆಬೆಕ್ಕಳ ಮಾತುಗಳನ್ನು ಕೇಳಿ, ಆ ಮನುಷ್ಯನ ಬಳಿಗೆ ಬಂದನು. ಅವನು ಇನ್ನೂ ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.


ದುಷ್ಟರು ನಿಶ್ಚಿಂತರಾಗಿ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.


ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.


“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.


“ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು