Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:49 - ಕನ್ನಡ ಸಮಕಾಲಿಕ ಅನುವಾದ

49 ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು” ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಿಮ್ಮ ಬೊಂಬೆಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸಿ ನಾನೇ ಕರ್ತನಾದ ಯೆಹೋವನು ಎಂದು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:49
17 ತಿಳಿವುಗಳ ಹೋಲಿಕೆ  

ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು.


ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ.


“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?


ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ.


“ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕರ್ಮದ ಪ್ರಕಾರ ಮಾಡದಿರಲೆಂದು ಅವರಿಗೆ ಬೋಧಿಸಿ ದೇಶದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.


ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು