Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:12 - ಕನ್ನಡ ಸಮಕಾಲಿಕ ಅನುವಾದ

12 ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಬಲು ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸಲೇಮ್ ತುಂಬಾ ಕಷ್ಟಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಬನ್ನು ತೆಗೆದುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:12
19 ತಿಳಿವುಗಳ ಹೋಲಿಕೆ  

ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.


ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.”


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


“ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.


ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ಕುಲುಮೆಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು